ಅರಣ್ಯನಾಶದ ಭೀಕರ ಪರಿಣಾಮದ ಮುನ್ಸೂಚನೆ! ನೀರಿಲ್ಲದೆ ಈ ಜಗತ್ತಿನ ಯಾವ ಜೀವರಾಶಿಯ ಬದುಕನ್ನೂ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದರೆ ಅದರ ಅರಿವಿರುವ ಮನುಷ್ಯರೇ ಮಾಡುತ್ತಿರುವ ಮಹಾ ಯಡವಟ್ಟುಗಳಿಂದಾಗಿ ದಿನೇ ದಿನೆ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಕಣ್ಣೆದುರೇ ವ್ಯಾಪಕ ಮಳೆಯಾಗಿ, ಪ್ರವಾಹದಿಂದ ಜನರ ಬದುಕು ಕೊಚ್ಚಿ ಹೋಗುತ್ತಿರೋದು ನಿಜ; ಆದರೆ ಅದರ ಬೆನ್ನ ಹಿಂದೆಯೇ ಭೀಕರ ಕ್ಷಾಮದ ಚಹರೆಯೊಂದು ತಣ್ಣಗೆ ನಿಂತಂತಿದೆ. ಯಾಕೆ ಹೀಗಾಗುತ್ತಿದೆ? ಅತ್ತ ಅತೀ ಮಳೆಯಾಗುತ್ತಿದೆ, ಇತ್ತ ಕುಡಿಯುವ ನೀರಿಗೆ ಇಷ್ಟರಲ್ಲಿಯೇ ಹಾಹಾಕಾರವೇಳೋ ಲಕ್ಷಣಗಳಿದ್ದಾವೆ. ಒಳ್ಳೆ ಮಳೆಯಾದರೆ ನೀರಿಗೆ ಕೊರತೆಯಿಲ್ಲ ಎಂಬಂಥಾ ಸಾರ್ವಕಾಲಿಕ ಸತ್ಯವೂ ಯಾಕೆ ಸುಳ್ಳಾಗುತ್ತಿದೆ? ಹೀಗೊಂದು ಭಯಮಿಶ್ರಿತ ಪ್ರಶ್ನೆ ಎಲ್ಲರೊಳಗೂ ಇದೆ. ಅದಕ್ಕೆ ಉತ್ತರವಾಗಿ ನಿಲ್ಲೋದು ವ್ಯಾಪಕ ಅರಣ್ಯ ನಾಶವಲ್ಲದೆ ಬೇರೇನೂ ಅಲ್ಲ! ಈ ಅರಣ್ಯ ನಾಶದಿಂದಾಗಿ ಜಾಗತಿಕ ವಾತಾವರಣವೇ ಇದೀಗ ಅದಲುಬದಲಾಗುತ್ತಿದೆ. ಅತ್ತ ನೀರಿನ ಹಾಹಾಕಾರದ ಲಕ್ಷಣಗಳು ಗೋಚರಿಸುತ್ತಿರುವಾಗಲೇ, ಇತ್ತ ಇರುವ ನೀರಿನ ಗುಣಮಟ್ಟವೂ ಹಾಳಾಗುತ್ತಿದೆ. ಹೀಗೆ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ಜರ್ಮನಿಯ ಸಂಶೋಧರಕ ತಂಡವೊಂದು…
Author: Santhosh Bagilagadde
ಮನೆಯೆದುರು ನಿಲ್ಲಿಸಿದ್ದ ಕಾರು, ಬೈಕುಗಳು ರಾತ್ರಿ ಬೆಳಗಾಗೋದರೊಳಗೆ ಮಾಯವಾಗೋದು ಬೆಂಗಳೂರಿನಂಥಾ ಮಹಾ ನಗರಗಳಲ್ಲಿ ಮಾಮೂಲಿ. ಆದರೆ, ಈ ಬಗ್ಗೆ ಪೊಲೀಸ್ ದೂರು ನೀಡಿ, ಪದೇ ಪದೆ ಠಾಣೆಗೆ ಅಂಡಲೆದು ಗೋಗರೆದರೂ ಮಾಯವಾದ ವಾಹನ ಮತ್ತೆ ಸಿಗುತ್ತದೆಂಬ ಖಾತರಿಯೇನಿಲ್ಲ. ಹೀಗೆ ವಾಹನಗಳು ಕಳುವಾದಾಗೆಲ್ಲ ನಮ್ಮೆಲ್ಲರ ಗುಮಾನಿ ಸ್ಥಳೀಯ ಕಾರುಗಳ್ಳರ ಸುತ್ತಲೇ ಗಿರಕಿ ಹೊಡೆಯಲಾರಂಭಿಸುತ್ತೆ. ಇದು ಅಂಥವರ ಕೆಲಸವೇ ಎಂಬ ತೀರ್ಮಾನಕ್ಕೂ ಬಂದು ಬಿಡುತ್ತವೆ. ವಾಸ್ತವವೆಂದರೆ, ನೀವು ಹಾಗೆ ಆಲೋಚಿಸುವ ಹೊತ್ತಿಗೆಲ್ಲಾ ನಿಮ್ಮ ಕಾರು ರಾಜ್ಯದ ಗಡಿ ದಾಟಿ, ನಂಬರ್ ಪ್ಲೇಟ್ ಬದಲಾಯಿಸಿಕೊಂಡು ಮತ್ಯಾರದ್ದೋ ಕೈ ಸೇರಿಬಿಟ್ಟಿರಲೂ ಬಹುದು. ಯಾಕೆಂದರೆ, ಇಂಥಾ ಕಾರುಗಳವಿನ ಹಿಂದೆ ಕುಖ್ಯಾತ ಅಂತಾರಾಜ್ಯ ಕಳ್ಳರ ಕೈಚಳಕ ಇರುವ ಸಾಧ್ಯತೆಗಳೇ ಹೆಚ್ಚಿರುತ್ತವೆ! ಹೀಗೆ ಬೆಂಗಳೂರೂ ಸೇರಿದಂತೆ, ದೇಶದ ನಾನಾ ಭಾಗಗಳಿಂದ ಕಾರು ಕಳ್ಳತನವಾದಾಗ ಅದರ ಹಿಂದೆ ರಾಷ್ಟ್ರ ಮಟ್ಟದ ಮಾಫಿಯಾ ಇರುವ ಗುಮಾನಿ ಪೊಲೀಸ್ ಇಲಾಖೆಯನ್ನು ಕಾಡುತ್ತಿತ್ತು. ನಾನಾ ರಾಜ್ಯಗಳ ಮಂದಿ ಈ ಬಗ್ಗೆ ತನಿಖೆಗಿಳಿದಾಗ ಎದುರುಗೊಂಡಿದ್ದದ್ದು ಅನಿಲ್ ಚೌವ್ಹಾಣ್ ಎಂಬಾತನ…
ನಿಯಾನ್ ದೀಪಗಳಾಚೆ ಕಾಮದ ಪರಿಷೆ! ಬೆಂಗಳೂರಿನ ತುಂಬಾ ಹರಡಿಕೊಂಡಿರುವ ಬಹುತೇಕ ಪಾರ್ಲರ್ ಹಾಗೂ ಸ್ಪಾಗಳ ಅಸಲೀ ರೂಪವೇ ಬೇರೆಯದ್ದಿದೆ. ಹೊರಗೆ ಸೌಂದರ್ಯ ಕಾಳಜಿಯ ರಂಗು ರಂಗಿನ ಬೋರ್ಡು, ಒಳಗೆ ಕಾಮದ ಕಥಕ್ಕಳಿ… ಇದು ಬೆಂಗಳೂರಿನ ತುಂಬಾ ಹಬ್ಬಿಕೊಂಡಿರುವ ಮಸಾಜ್ ಸೆಂಟರ್ ಅರ್ಥಾತ್ ಸ್ಪಾಗಳ ಅಸಲಿ ಅಂತರಾಳ. ಐಟಿ ಸಿಟಿಯ ನಿಯಾನ್ ದೀಪಗಳಾಚೆಗಿನ ಮಿಣುಕು ಕತ್ತಲಲ್ಲಿ ನಡೆಯುವ ವೇಶ್ಯಾ ದಂಧೆಯದ್ದೇ ಒಂದು ತೂಕವಾದರೆ, ಬೃಹತ್ ಮಹಲುಗಳಲ್ಲಿ ನಡೆಯುವ ಇಂಥಾ ಮಸಾಜ್ ಪಾರ್ಲರುಗಳಲ್ಲಿ ಚಾಲ್ತಿಯಲ್ಲಿರುವ ಸೆಕ್ಸ್ ರ್ಯಾಕೆಟ್ಟಿನದ್ದೇ ಮತ್ತೊಂದು ತೂಕ. ಇತ್ತೀಚೆಗಂತೂ ನಗರದ ತುಂಬಾ ಇಂಥಾ ಹೈಟೆಕ್ ವೇಶ್ಯಾ ಅಡ್ಡೆಗಳು ಎಗ್ಗಿಲ್ಲದೆ ದಂಧೆ ನಡೆಸುತ್ತಿವೆ. ಪಿಂಪ್ಗಳಂತೂ ಯಾವುದೇ ಭಯವಿಲ್ಲದೆ ಗಿರಾಕಿ ಹುಡುಕಿ ಕಾಸು ಪೀಕುವ ಕೆಲಸದಲ್ಲಿ ಫುಲ್ ಬ್ಯುಸಿ. ಬೆಂಗಳೂರಿನ ಸಖಲ ಏರಿಯಾಗಳಲ್ಲಿಯೂ ಇಂಥಾ ಮಸಾಜ್ ಸೆಂಟರುಗಳು ತಲೆಯೆತ್ತಿವೆ. ಅದರಲ್ಲಿ ಬಹುತೇಕ ವೇಶ್ಯಾ ದಂಧೆಯ ಕಾರಸ್ಥಾನಗಳಾಗಿ ಬದಲಾಗಿವೆ. ಮರ್ಯಾದಸ್ಥರು ವಾಸಿಸುವ ಪ್ರದೇಶಗಳಲ್ಲಿ ಇಂಥಾ ಅಡ್ಡೆಗಳು ತಲೆಯೆತ್ತಿ ನೆಮ್ಮದಿಯಾಗಿ ಓಡಾಡಲೂ ಆಗದ ಪರಿಸ್ಥಿತಿ ಇದೆ. ಇಂಥಾ…
ಇನ್ನೊಂದಷ್ಟು ವರ್ಷ ಕಳೆಯುತ್ತಲೇ ಬೆಂಗಳೂರಿನ ಬದುಕು ಮತ್ತಷ್ಟು ದುಸ್ತರವಾಗಲಿದೆಯಾ? ಇಂಥಾದ್ದೊಂದು ಪ್ರಶ್ನೆ ಹುಟ್ಟಿಕೊಂಡು ಒಂದಷ್ಟು ವರ್ಷಗಳೇ ಕಳಿದಿವೆ. ಅದರ ಜೊತೆ ಜೊತೆಗೇ ಬೆಂಗಳೂರು ಮತ್ತಷ್ಟು ನಿಗೂಢ ವಾಗುತ್ತಾ, ವಿಕ್ಷಿಪ್ತವಾಗುತ್ತಲೇ ಸಾಗುತ್ತಿದೆ. ಇಲ್ಲಿನ ಯುವಕ ಯುವತಿಯರಲ್ಲಿ ಒಂದಷ್ಟು ಮಂದಿ ಈಗಾಗಲೇ ನಶೆಯ ಜಗತ್ತಿಗೆ ಶರಣೆಂದಿದ್ದಾರೆ. ತೀರಾ ಕಟ್ಟುನಿಟ್ಟಿನ ನೀತಿ ನಿಯಮಾವಳಿ ಜಾರಿಯಿರುವ ಶಾಲಾ ಕಾಲೇಜುಗಳಲ್ಲಿ ಕೂಡಾ ಕುಂತಲ್ಲೇ ಕೈಚಾಚಿದರೂ ಸಲೀಸಾಗಿಯೇ ಬೇಕಿನ್ನಿಸಿದ ಬ್ರಾಂಡಿನ ಡ್ರಗ್ಸ್ ಸಿಗುವಂಥಾ ವಾತಾವರಣವಿದೆ. ಡ್ರಗ್ಸ್ ಚಟಕ್ಕೆ ತುತ್ತಾದವರನ್ನು ಹಾದಿ ಬಿಟ್ಟವರೆಂದು ಜರಿದು ಸುಮ್ಮನಾಗುವುದು ಸಲೀಸಿನ ಸಂಗತಿ. ಆದರೆ ಅದೆಂಥಾ ಮಡಿವಂತಿಕೆಯಕೋಟೆಯನ್ನಾದರೂ ಬೇಧಿಸಿ ಒಳ ನುಗ್ಗಿ ಬಿಡುವಂಥಾ ತೀವ್ರ ಸ್ವರೂಪದಲ್ಲಿ ಡ್ರಗ್ಸ್ ದಂಧೆ ಬೆಳೆದು ನಿಂತಿದೆ. ಯಾವುದು ನಿಶೇಧಿತವೋ ಅಂಥಾದ್ದರ ಕಡೆಗೇ ಹೆಚ್ಚು ಆಕರ್ಷಿತಗೊಳ್ಳುವ ಎಳೇ ಮನಸುಗಳಿರುವ ಶಾಲಾ ಕಾಲೇಜುಗಳಲ್ಲಿಯೂ ಈವತ್ತಿಗೆ ಮಾದಕ ವಸ್ತುಗಳು ಅತ್ಯಂತ ಸಲೀಸಾಗಿಯೇ ಸಿಗುತ್ತಿದೆ. ಇಂದು ನೈಜೀರಿಯಾ, ಆಫ್ರಿಕಾ, ಸೊಮಾಲಿಯಾದಂಥ ದೇಶಗಳ ವಿದ್ಯಾರ್ಥಿಗಳು ಬೆಂಗಳೂರಲ್ಲಿ ಓದಲು ಬಂದರೆ, ಅಂಥವರ ಆರ್ಥಿಕ ಸ್ಥಿತಿಯನ್ನೇ ಎನ್ಕ್ಯಾಶ್ ಮಾಡಿಕೊಂಡು ಡೀಲರುಗಳಾಗಿ…
ಈ ನಟನ ಕಥೆ ಕೇಳಿದರೆ ಕಣ್ಣಾಲಿಗಳು ಹನಿಗೂಡುತ್ತವೆ! ಕೊರೋನಾ ಮಾರಿ ಈ ಮುಂಗಾರಿನಲ್ಲಿ ಮೈಕೈ ತೊಳೆದುಕೊಂಡು ಮಟ್ಟಸವಾಗಿ ಇಡೀ ಜಗತ್ತಿನ ಜನಸಖ್ಯೆಯನ್ನು ಆದಷ್ಟು ಕಡಿಮೆ ಮಾಡಿಯೇ ತೊಲಗಬಹುದಾದ ಎಲ್ಲ ಲಕ್ಷಣಗಳೂ ಕಾಣಿಸುತ್ತಿವೆ. ಎಲ್ಲರೆದೆಯೊಳಗಿನ ಆಶಾವಾದವೆಂಬುದೀಗ ವಾರಗಳ ಗಡಿ ದಾಟಿ ತಿಂಗಳುಗಳಾಚೆಗೆ ಕೈಚಾಚಿಕೊಂಡಿದೆ. ಜನಜೀವನ ಅದ್ಯಾವತ್ತು ಮತ್ತೆ ಸಹಜ ಸ್ಥಿತಿಗೆ ಮರಳಬಹುದೆಂಬ ಆಲೋಚನೆಗಿಳಿದರೆ ಯಾರಿಗೇ ಆದರೂ ಕಿಬ್ಬೊಟ್ಟೆಯಾಳದಿಂದ ಭಯದ ಛಳುಕಲ್ಲದೆ ಬೇರ್ಯಾವ ಭರವಸೆಯ ಬೆಳಕೂ ಗೋಚರಿಸುತ್ತಿಲ್ಲ. ಒಂದು ತಿಂಗಳು ಆರ್ಥಿಕವಾಗಿ ಹಿನ್ನಡೆಯಾದರೆ ವರ್ಷಗಟ್ಟಲೆ ಅದರ ಪರಿಣಾಮ ಅನುಭವಿಸುವ ಮಂದಿ ತಿಂಗಳುಗಟ್ಟಲೆ ಖಾಲಿ ಕೂತರೆ ಏನಾಗಬಹುದೆಂಬುದು ಯಾರಿಗಾದರೂ ಅರ್ಥವಾಗೋ ಸಂಗತಿ. ನಿಖರವಾಗಿ ಹೇಳಬೇಕೆಂದರೆ ಈ ಕೊರೋನಾ ಎಲ್ಲ ರೀತಿಯಲ್ಲಿಯೂ ಮನುಷ್ಯಮಾತ್ರರಿಗೆ ಕೇಡುಗಾಲ ತಂದಿಟ್ಟಿದೆ. ಈವತ್ತಿಗೆ ಕೊರೋನಾ ಮಾರಿ ಕೊಂಚ ಶಾಂತವಾದಂತೆ ಕಾಣುತ್ತಿದ್ದರೂ, ಎರಡು ವರ್ಷಗಳ ಅವ್ಯಾಹರತ ಪ್ರಹಾರದಿಂದ ಜಗತ್ತು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಸದ್ಯ ಪರಿಸ್ಥಿತಿ ಹೇಗಿದೆಯೆಂದರೆ, ಲಾಕ್ಡೌನಿನ ಪ್ರಹಾರದ ಆಘಾತದಿಂದ ಜನ ಇನ್ನೂ ಹೊರ ಬಂದಿಲ್ಲ. ಪ್ರಿಯೊಬ್ಬರ ಬದುಕನ್ನೂ ಕೊರೋನಾ ನೆರಳು ಬಾಧಿಸುತ್ತಿದೆ;…
ನಮ್ಮ ಸುತ್ತ ಪಾಸಿಟಿವ್ ಎನರ್ಜಿ ಇದೆ ಎಂದ ಮೇಲೆ ನೆಗೆಟಿವ್ ಎನರ್ಜಿಯೂ ಇದ್ದೇ ಇರುತ್ತೆ ಅನ್ನೋದು ಹಲವರ ವಾದ. ಈ ನೆಗೆಟಿವ್ ಎನರ್ಜಿ ಅನ್ನೋದು ನಮ್ಮ ನಡುವೆ ದೆವ್ವ, ಭೂತ ಪ್ರೇತ ಬಾಧೆಗಳಾಗಿ ಹಾಸು ಹೊಕ್ಕಾಗಿವೆ. ಅದು ಮೂಢ ನಂಬಿಕೆಗಳ ಸಾಲಿಗೆ ಸೇರಿರೋದರಿಂದ ಅಂಥಾ ಶಕ್ತಿಯೇ ಈ ಜಗತ್ತಿನಲ್ಲಿಲ್ಲ ಎಂಬುದನ್ನು ಸಾಬೀತ ಪಡಿಸುವ ಪ್ರಯತ್ನಗಳೂ ಅವ್ಯಾಹತವಾಗಿ ನಡೆಯುತ್ತಿವೆ. ಅದೆಲ್ಲವನ್ನೂ ಮೀರಿಕೊಂಡು ಇಂಥಾ ನಂಬಿಕೆಗಳು ಆರ್ಭಟಿಸುತ್ತಲೇ ಇದ್ದಾವೆ. ಈವತ್ತಿಗೆ ಅಂಥಾ ನಂಬಿಕೆಗಳು, ಭೂತ ಚೇಷ್ಟೆಗಳು ಹಿಂದಿನ ಪ್ರಮಾಣದಲ್ಲಿಲ್ಲ ಅಂತ ನಾವೆಲ್ಲ ಅಂದುಕೊಳ್ಳುತ್ತೇವೆ. ಅದನ್ನು ಸುಳ್ಳು ಮಾಡುವಂಥಾ ವಿಚಾರಗಳು ಸಾಕಷ್ಟಿವೆ. ಗುಜರಾತ್ ರಾಜ್ಯದ ಕಡಲ ಕಿನಾರೆಯೊಂದು ಈ ಮಾತನ್ನು ಸಾಕ್ಷೀಕರಿಸುವಂತಿದೆ. ಅದು ಗುಜರಾತಿನ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳಗಳಲ್ಲಿ ಒಂದಾಗಿರೋ ಡುಮಾಸ್ ಕಡಲ ತೀರ. ಕಣ್ಣಿಗೆ ತಂಪೆನಿಸುವ, ಮನಸಿಗೆ ಹಾಯೆನಿಸುವ ವಾತಾವರಣದಿಂದಲೇ ಈ ಬೀಚ್ ವೀಕ್ಯಾತಿ ಗಳಿಸಿಕೊಂಡಿದೆ. ಅರೇಬಿಯನ್ ಸಮುದ್ರದ ಈ ಕಿನಾರೆ ಸೂರತ್ ನಗರದಿಂದ ಇಪ್ಪತ್ತೊಂದು ಕಿಲೋಮೀಟರ್ ದೂರದಲ್ಲಿದೆ. ಈ ಬೀಚ್ ಯಾವಾಗಲೂ ಪ್ರವಾಸಿಗರಿಂದ…
ನಟ ನಟಿಯರ ಖಾಸಗೀ ಬದುಕಿನ ಬಗ್ಗೆ ಜನಸಾಮಾನ್ಯರಲ್ಲೊಂದು ಕುತೂಹಲ ಸದಾ ಇದ್ದೇ ಇರುತ್ತದೆ. ಈ ಕಾರಣದಿಂದಲೇ ಇವರ ಬದುಕುಗಳು ಆಗಾಗ ರೂಮರ್ಗಳಿಗೂ ಆಹಾರವಾಗುತ್ತಲೇ ಇರುತ್ತದೆ. ಆದರೆ ಇಲ್ಲಿನ ಬಹುತೇಕರ ವೈಯಕ್ತಿಕ ಬದುಕು ಅಧ್ವಾನವೆದ್ದುಬಿಟ್ಟಿರುತ್ತೆ. ಇಲ್ಲಿ ಪ್ರೀತಿ, ಪ್ರೇಮ, ಸಂಸಾರ ಸೇರಿದಂತೆ ಯಾವುದೂ ಕೂಡಾ ಹೆಚ್ಚು ದಿನ ಬಾಳಿಕೆ ಬರುವುವಂಥಾದದ್ದಲ್ಲ ಎಂಬ ಮಾತಿದೆ. ಇದಕ್ಕೆ ಅಪವಾದದಂತೆ ಕೆಲವರಿರೋದು ಹೌದಾದರೂ ಮತ್ತುಳಿದವರ ಕಥೆಗಳು ಅದಕ್ಕೆ ಪೂರಕವಾಗಿವೆ. ಅದರಲ್ಲಿಯೂ ನಟಿಯರಂತೂ ಗುಟ್ಟಾಗಿ ಮದುವೆಯಾಗಿ ಸಂಸಾರ ನಡೆಸೋದರಲ್ಲಿ ಫೇಮಸ್ಸು. ಇಲಿಯಾನಾ ಮದುವೆಯಾದ ಸುದ್ದಿ ಇತ್ತೀಚೆಗೆ ಡಿವೋರ್ಸ್ ರೂಮರ್ನೊಂದಿಗೇ ಜಾಹೀರಾಗಿತ್ತು. ಇದೀಗ ಮೈನಾ ಖ್ಯಾತಿಯ ನಿತ್ಯಾ ಮೆನನ್ ಸುತ್ತಲೂ ಮದವೆ ವಿಚಾರವಾಗಿ ಅಂಥಾದ್ದೇ ರೂಮರ್ ಹಬೆಯಾಡಲಾರಂಭಿಸಿದೆ. ನಿತ್ಯಾ ಮೆಲನನ್ ಮೂಲ ಕೇರಳದವಳೇ ಆದರೂ ಕನ್ನಡದ ಹುಡುಗಿ. ಕನ್ನಡದ ನಟಿಯರೇ ಕನ್ನಡದಲ್ಲಿ ಮಾತಾಡಲು ತಿಮಿರು ತೋರಿಸುವ ಈ ದಿನಮಾನದಲ್ಲಿ ಅರಳು ಹುರಿದಂತೆ ಸ್ಪಷ್ಟವಾಗಿಯೇ ಕನ್ನಡ ಮಾತಾಡೋ ನಿತ್ಯಾ ಕನ್ನಡಿಗರಿಗೆ ಅಚ್ಚುಮೆಚ್ಚಿನ ನಟಿ. ವಿವಾದಗಳಿಂದ ಸಾಕಷ್ಟು ದೂರವಿರಲು ಪ್ರಯತ್ನಿಸುತ್ತಲೇ ಸಿನಿಮಾ ಮೂಲಕ…
ದಕ್ಷಿಣಾಫ್ರಿಕಾ ಮೂಲದ ಮಂದಿ ಬೆಂಗಳೂರಲ್ಲಿ ನಡೆಸುತ್ತಿರುವ ಅಕ್ರಮ ದಂಧೆಗಳ ಪಟ್ಟಿ ದೊಡ್ಡದಿದೆ. ಬೆಂಗಳೂರಿನ ಮಂದಿ ಇವರ ಹಾವಳಿ ತಡೆದುಕೊಳ್ಳಲಾರದೆ ಹಿಡಿದು ಬಾರಿಸಿದರೆ ಬೆಂಗಳೂರಲ್ಲಿ ವಾಸ ಮಾಡುತ್ತಿರುವ ದಕ್ಷಿಣಾಫ್ರಿಕಾ ಖಂಡದ ಮಂದಿ ವಿಶ್ವದ ಮಾಧ್ಯಮಗಳ ಮುಂದೆ ನಿಂತು ಅಮಾಯಕರಂತೆ ಪೋಜು ಕೊಡುತ್ತಾರೆ. ಒಂದು ಮಗ್ಗುಲನ್ನೇ ಮುಂದಿಟ್ಟುಕೊಂಡು ಚರ್ಚೆ ನಡೆಸುತ್ತಿರುವ ಭಾರತೀಯ ಮಾಧ್ಯಮಗಳೇ ಬೆಂಗಳೂರಿಗರ ಅಖಂಡ ಸೈರಣೆಗೆ ಮಹಾ ಅವಮಾನ ಎಸಗುತ್ತವೆ. ಆದರೆ ದಕ್ಷಿಣಾಫ್ರಿಕಾ ಮೂಲದ ಆಸಾಮಿಗಳು ಇಲ್ಲಿ ಎಂತೆಂಥಾ ದಂಧೆ ನಡೆಸುತ್ತಿದ್ದಾರೆ, ಅವರು ತಮ್ಮ ಖಂಡದಿಂದ ಇಲ್ಲಿಗೆ ಓದಲು ಬಂದ ವಿದ್ಯಾರ್ಥಿಗಳನ್ನೂ ಹೇಗೆಲ್ಲಾ ಅದಕ್ಕೆ ಬಳಸಿಕೊಳ್ಳುತ್ತಿದ್ದಾರೆಂಬ ಬಗ್ಗೆ ತಲಾಶ್ ನಡೆಸಿದರೆ ಆಘಾತಕಾರಿ ಮಾಹಿತಿಗಳೇ ಹೊರ ಬೀಳುತ್ತವೆ. ವ್ಯಾಪಾರ ವಹಿವಾಟು ಸೇರಿದಂತೆ ನಾನಾ ನೆಪದಿಂದ ಇಲ್ಲಿಗೆ ಬರುವ ಆಫ್ರಿಕಾ ಮೂಲದವರು ವಿಸಾ ಅವಧಿ ಮುಗಿದ ಮೇಲೂ ಇಲ್ಲಿಯೇ ಝಾಂಡಾ ಊರುತ್ತಾರೆ. ಮೊದಲಿಗೆ ಬೆಂಗಳೂರಿಗೆ ಬಂದು ವಿಸಾ ಅವಧಿ ಮುಗಿದ ಮೇಲೆ ಕಾನೂನಿನ ಕಣ್ಣಿಂದ ತಪ್ಪಿಸಿಕೊಳ್ಳಲು ರಾಜ್ಯದ ನಾನಾ ಮೂಲೆಗಳಲ್ಲಿ ಚದುರಿಕೊಳ್ಳುತ್ತಾರೆ. ಈ ನಿಟ್ಟಿನಲ್ಲಿ ಮಾಹಿತಿ…
ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡುಗಳ ವಂಚನಾ ಜಾಲ ಮತ್ತೊಮ್ಮೆ ಸದ್ದು ಮಾಡಿದೆ. ದೇಶದ ಕೋಟ್ಯಾಂತರ ಬ್ಯಾಂಕ್ ಖಾತೆಗಳಲ್ಲಿನ ಅಷ್ಟೂ ಹಣ ಏಕಾಏಕಿ ಕರಗಿ ಹೋಗಿದ್ದೇ ಗ್ರಾಹಕರೆಲ್ಲ ಕಂಗಾಲೆದ್ದು ಹೋಗಿದ್ದಾರೆ. ರಿಸರ್ವ್ ಬ್ಯಾಂಕ್ ನಯಮಾವಳಿಯ ಪ್ರಕಾರ ಯಾವುದೇ ಬ್ಯಾಂಕ್ ಖಾತೆಯಿಂದ ಗ್ರಾಹಕರಿಗೆ ಗೊತ್ತಿಲ್ಲದಂತೆಬ ಹಣ ಖಾಲಿಯಾದರೆ ಆಯಾ ಬ್ಯಾಂಕುಗಾಳೇ ಆ ಮ,ಒತ್ತ ಭರಿಸಬೇಕೆಂದಿದೆ. ಆ ನಿಯಮದ ಪ್ರಕಾರವೇ ಹೋದರೆ ಬ್ಯಾಂಕುಗಳೇ ಬರಿದಾಗುವ ರೇಂಜಿಗೆ ಇಂಥಾ ಖಾಸಗಿ ಖಾತೆಗಳ ಹಣ ಹೀರಿಕೊಂಡಿದ್ದು ಚಾಲಾಕಿ ಹ್ಯಾಕರ್ಸ್. ಹೈಟೆಕ್ ತಂತ್ರಜ್ಞಾನಗಳನ್ನೆಲ್ಲ ಒಂದು ಹೆಜ್ಜೆ ಮುಂದೆ ನಿಂತು ವಂಚನೆಗೆ ಬಳಸಿಕೊಳ್ಳುವ ಹೈಟೆಕ್ ವಂಚಕರು ತಿಂಗಳೀಚೆಗೆ ದೇಶಾದ್ಯಂತ ನಡೆಸಿರುವ ಕೈಚಳಕ ಕಂಡು ದೇಶಕ್ಕೆ ದೇಶವೇ ಥಂಡಾ ಹೊಡೆದು ಹೋಗಿದೆ. ಅಂದಹಾಗೆ ಈ ವಂಚನಾ ಜಾಲದ ಕಿಂಗ್ಪಿನ್ ಭಾರತದವನೇ ಎಂಬುದು ಯಾವತ್ತೋ ಜಾಹೀರಾಗಿದೆ! ಈಗ ಜೇಬಲ್ಲಿ ಹಣ ಇಟ್ಟುಕೊಂಡು ಹೋಗಿ ವ್ಯವಹಾರ ಮಾಡುವವರೇ ಅನಾಗರಿಕರು ಎಂಬಂಥಾ ವಾತಾವರಣವಿದೆ. ದೊಡ್ಡ ದೊಡ್ಡ ಶಾಪಿಂಗ್ ಮಾಲ್ಗಳಿಂದ ಮೊದಲ್ಗೊಂಡು ದಿನಸಿ ಅಂಗಡಿ, ಪೆಟ್ರೋಲ್ ಬಂಕ್ಗಳವರೆಗೂ ಕ್ರೆಡಿಟ್…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಐರಾವತ ಚಿತ್ರದ ಮೂಲಕ ಕನ್ನಡಕ್ಕೆ ಪರಿಚಯವಾಗಿದ್ದ ನಟಿ ಊರ್ವಶಿ ರೌಟೇಲಾ. ಅದಾಗಲೇ ಬಾಲಿವುಡ್ನಲ್ಲಿ ಒಂದಿಷ್ಟು ಹೆಸರು ಮಾಡಿಕೊಂಡಿದ್ದ ಊರ್ವಶಿ ಮೊದಲ ಚಿತ್ರದಲ್ಲಿಯೇ ಕನ್ನಡ ಪ್ರೇಕ್ಷಕರಿಗೂ ಇಷ್ಟವಾಗಿ ಬಿಟ್ಟಿದ್ದಳು; ಒಂದಷ್ಟು ಅಭಿಮಾನಿ ಬಳಗವನ್ನೂ ತನ್ನದಾಗಿಸಿಕೊಂಡಿದ್ದಳು. ಐರಾವತ ಹೇಳಿಕೊಳ್ಳುವಂಥಾ ಸಕ್ಸಸ್ ಕಾಣದಿದ್ದರೂ ದರ್ಶನ್ ಮತ್ತು ಊರ್ವಶಿ ರಾಟೇಲಾ ಜೋಡಿ ಮಾತ್ರ ಅಭಿಮಾನಿ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಆದರೆ ಆ ನಂತರ ಮತ್ತೆಂದೂ ಊರ್ವಶಿ ಕನ್ನಡದಲ್ಲಿ ಕಾಣಿಸಿಕೊಂಡಿರಲೇ ಇಲ್ಲ. ಹಾಗಾದರೆ ಊರ್ವಶಿ ಐರಾವತ ಚಿತ್ರದ ನಂತರದಲ್ಲಿ ಮತ್ತೆಲ್ಲಿ ಹೋದಳು, ಬಾಲಿವುಡ್ ಸೇರಿದಂತೆ ಬಹುಭಾಷಾ ತಾರೆಯಾಗಿ ಮಿಂಚುತ್ತಿದ್ದಾಳಾ ಎಂಬಿತ್ಯಾದಿ ಪ್ರಶ್ನೆಗಳು ಒಂದಷ್ಟು ಮಂದಿಯಲ್ಲಾದರೂ ಇರಬಹುದು. ಅಷ್ಟಕ್ಕೂ ಹಾಗೆ ಯಾವುದೇ ಭಾಷೆಯಲ್ಲಿ ಮಿಂಚುವಂಥಾ ಎಲ್ಲ ಗುಣ ಲಕ್ಷಣಗಳನ್ನೂ ಹೊಂದಿದ್ದ ಊರ್ವಶಿ ಈಗ ಅವಕಾಶಗಳ ಕೊರತೆ ಎದುರಿಸುತ್ತಿದ್ದಾಳೆ. ಆಕೆಗೆ ಒಂದಷ್ಟು ಅವಕಾಶಗಳು ಸಿಗುತ್ತಿವೆಯಾದರೂ ಅದರಲ್ಲಿನ ಪಾತ್ರಗಳು ಬಟ್ಟೆ ಬಿಚ್ಚ ಪೋಸು ಕೊಡೋದಪಕ್ಕೆ ಮಾತ್ರವೇ ಸೀಮಿತವಾಗಿ ಬಿಟ್ಟಿವೆಯಂತೆ. ಗ್ರೇಟ್ ಗ್ರ್ಯಾಂಡ್ ಮಸ್ತಿ, ಹೇಟ್ ಸ್ಟೋರಿ ೪ ಮುಂತಾದ…